ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ - “ಸರ್ವಶಕ್ತ ಸರ್ವೇಶ್ವರ ನಮ್ಮ ಸಂತತಿಯಲ್ಲಿ ಕೆಲವರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ಗತಿಯೇ ನಮ್ಮದಾಗುತ್ತಿತ್ತು,” ಎಂದು ಹೇಳಿದ್ದಾನೆ.