ಆದ್ದರಿಂದ ಸಹೋದರರೇ, ಪ್ರಭು ಪುನರಾಗಮಿಸುವವರೆಗೆ ತಾಳ್ಮೆಯಿಂದ ಇರಿ. ರೈತನನ್ನು ಗಮನಿಸಿರಿ: ತನ್ನ ಹೊಲದಲ್ಲಿ ಉತ್ತಮ ಬೆಳೆಯನ್ನು ನಿರೀಕ್ಷಿಸುವ ಅವನು ಮುಂಗಾರು ಹಿಂಗಾರು ಮಳೆಗಾಗಿ ತಾಳ್ಮೆಯಿಂದ ಕಾದಿರುತ್ತಾನೆ.