ಅನಂತರ ಆಕಾಶಮಧ್ಯದಲ್ಲಿ ಒಂದು ಗರುಡ ಪಕ್ಷಿ ಹಾರಾಡುತ್ತಿರುವುದನ್ನು ನಾನು ಕಂಡೆ. ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು,” ಎಂದು ಗಟ್ಟಿಯಾಗಿ ಕೂಗುತ್ತಿತ್ತು.