ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.