ಅನಂತರ ದಾವೀದನು ಸರ್ವೇಶ್ವರನನ್ನು, “ನಾನು ಜುದೇಯ ನಾಡಿನ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೇ?” ಎಂದು ಕೇಳಿದನು. “ಹೋಗಬಹುದು” ಎಂದರು ಸರ್ವೇಶ್ವರ. ಅವನು ಪುನಃ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ, “ಹೆಬ್ರೋನಿಗೆ ಹೋಗು,” ಎಂಬ ಉತ್ತರ ಸಿಕ್ಕಿತು.