ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಸರ್ವೇಶ್ವರನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.