ಆಗ ಅರಸ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮ್ಮ ಪರವಾಗಿ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಕೊಟ್ಟರೆ ನೀವು ಸರ್ವೇಶ್ವರನ ಪ್ರಜೆಯನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.