“ನನ್ನ ಒಡೆಯರಾದ ಅರಸರು ತಮ್ಮ ಸೇವಕನ ಬಳಿಗೆ ಬರುವುದಕ್ಕೇನು ಕಾರಣ?” ಎಂದು ಕೇಳಿದನು. ದಾವೀದನು, “ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಪೀಠವನ್ನು ಕಟ್ಟುವುದಕ್ಕೆ ಬಂದಿದ್ದೇನೆ,” ಎಂದು ಉತ್ತರಕೊಟ್ಟನು.