ಬೆನ್ಹದದನು ಅರಸ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.