ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.