ಅವನು ಹಜಾಯೇಲನನ್ನು ಕರೆದು, “ನೀನು ಕಾಣಿಕೆಯನ್ನು ತೆಗೆದುಕೊಂಡು ದೈವಪುರುಷನ ಬಳಿಗೆ ಹೋಗಿ ನನಗೆ ಗುಣ ಆಗುವುದೋ ಇಲ್ಲವೋ ಎಂಬುದನ್ನು ಅವನ ಮುಖಾಂತರ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸು,” ಎಂದು ಆಜ್ಞಾಪಿಸಿದನು.