ಆದುದರಿಂದ ಸರ್ವೇಶ್ವರಸ್ವಾಮಿ ಇಸ್ರಯೇಲರ ಮೇಲೆ ಕೋಪಗೊಂಡು, ಅವರನ್ನು ಸಿರಿಯಾದವರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದರು. ಇಸ್ರಯೇಲರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಸಿರಿಯಾದವರ ಕೈಕೆಳಗಿದ್ದರು.