ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.