ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಬಹಳವಾಗಿ ಉಬ್ಬಿಕೊಂಡಿರುವೆ; ಆ ಕೀರ್ತಿ ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲೇ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಏಕೆ ಕೇಡನ್ನು ಬರಮಾಡಿಕೊಳ್ಳುವೆ?” ಎಂದು ಉತ್ತರಕೊಟ್ಟು ಕಳುಹಿಸಿದನು.