ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹ್ಯನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧ ಒಳಸಂಚುಮಾಡಿ ಸಮಾರಿಯದಲ್ಲಿರುವ ಅರಮನೆಯ ಗರ್ಭಗೃಹದಲ್ಲೇ ಇವನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು.