ಆಹಾಜನು ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪೆಲೆಸರನ ಬಳಿಗೆ ದೂತರನ್ನು ಕಳುಹಿಸಿ, “ನಾನು ನಿಮ್ಮ ಸೇವಕ ಹಾಗು ಕುವರ; ನೀವು ಬಂದು ನನ್ನನ್ನು, ನನಗೆ ವಿರುದ್ಧ ದಂಡೆತ್ತಿ ಬಂದಿರುವ ಸಿರಿಯಾದವರ ಮತ್ತು ಇಸ್ರಯೇಲರ ಅರಸುಗಳ ಕೈಗೆ ಸಿಕ್ಕದಂತೆ, ಕಾಪಾಡಿ,” ಎಂದು ಹೇಳಿಸಿದನು.