ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.