ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದ ಮೇಲೆ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಸರ್ವೇಶ್ವರಸ್ವಾಮಿ ಅವನನ್ನು ಹರಸಿ ಮಹಾ ಬಲಾಢ್ಯನಾಗುವಂತೆ ಮಾಡಿದರು.