ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಸರ್ವೇಶ್ವರ ತಮ್ಮನ್ನು ಆರಾಧಿಸುವುದಕ್ಕೂ ತಮಗೆ ಧೂಪಾರತಿ ಎತ್ತುವುದಕ್ಕೂ ನಿಮ್ಮನ್ನು ತಮ್ಮ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡರಲ್ಲವೇ?’ ಎಂದು ಹೇಳಿದನು.