ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಜೆರುಸಲೇಮನ್ನು ಸೇರಿ ರಾಜ ಕಂಟಕವಾದ ಆ ದುಷ್ಟಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.