ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.