ಏಕೆಂದರೆ ಅವರು ಇಸ್ರಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ; ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಅವನನ್ನು ಕರೆಸಿದ್ದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದರು ಎಂಬ ಮಾತು ಬರೆದಿರುವುದಾಗಿ ಗೊತ್ತಾಯಿತು.