ಆ ಕಾಲದಲ್ಲಿ, ಜನರು ಸಬ್ಬತ್ದಿನ ಜುದೇಯನಾಡಿನಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನು ಕಂಡೆ; ಅಂತೆಯೇ ಕಣದ ಕಾಳನ್ನು ಕೂಡಿಸಿ ಆ ಕಾಳು, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು, ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಜೆರುಸಲೇಮಿಗೆ ತರುವುದನ್ನು ಗಮನಿಸಿದೆ. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ಅವರನ್ನು ಗದರಿಸಿದೆ.
Go to Home Page