ಎಸ್ತೇರಳು ಪ್ರತ್ಯುತ್ತರವಾಗಿ, “ಅರಸರು ನನ್ನ ಮೇಲೆ ಕೃಪಾಕಟಾಕ್ಷವನ್ನಿಟ್ಟು ಈಡೇರಿಸುವುದಾದರೆ ನನ್ನ ವಿಜ್ಞಾಪನೆಯನ್ನು, ಪ್ರಾರ್ಥನೆಯನ್ನು ಆಲಿಸಿ, ನನ್ನ ಪ್ರಾಣವನ್ನು ಹಾಗು ನನ್ನ ಜನರ ಪ್ರಾಣವನ್ನು ಉಳಿಸಬೇಕು.