ಅವನು, “ಸ್ವಾಮಿಯ ಸಂಗಡ ಮಾತನಾಡಲು ನಾನು ಇನ್ನೂ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತೇ ಮಂದಿ ಅಲ್ಲಿ ಸಿಕ್ಕಾರು,” ಎನ್ನಲು, ಸರ್ವೇಶ್ವರ, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಅದನ್ನು ಉಳಿಸುತ್ತೇನೆ, ನಾಶಮಾಡುವುದಿಲ್ಲ,” ಎಂದರು.