ಅದಕ್ಕೆ ಅವರು, ‘ಯಾವ ಸರ್ವೇಶ್ವರ ಸ್ವಾಮಿಗೆ ನಾನು ವಿಧೇಯನಾಗಿ ನಡೆದುಕೊಂಡೆನೋ ಅವರು ತಮ್ಮ ದೂತನನ್ನು ನಿನ್ನೊಂದಿಗೆ ಕಳುಹಿಸುವರು. ನನ್ನ ತಂದೆಯ ಮನೆತನಕ್ಕೆ ಸೇರಿದ ಬಂಧುಬಳಗದವರಿಂದಲೇ ನನ್ನ ಮಗನಿಗೆ ಹೆಣ್ಣು ತರಲು ನಿನಗೆ ಅನುಕೂಲ ಮಾಡಿಕೊಡುವರು.