ನಾನು ಇವೆಲ್ಲವನ್ನು ಪರ್ಯಾಲೋಚಿಸಿ ಇದನ್ನು ಮನಗಂಡೆ: ಸತ್ಪುರುಷರ ಹಾಗೂ ಸುಜ್ಞಾನಿಗಳ ಕಾರ್ಯಗಳೆಲ್ಲವೂ ದೇವರ ಕೈಯಲ್ಲಿವೆ. ತಾವು ಪ್ರೀತಿಗೆ ಪಾತ್ರರೋ ದ್ವೇಷಕ್ಕೆ ಅರ್ಹರೋ ಮಾನವರಿಗೆ ತಿಳಿಯದು. ಮುಂದೆ ಏನು ಕಾದಿದೆ ಎಂಬುದು ಯಾರಿಗೂ ಗೊತ್ತಿಲ್ಲ.