ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.