ಆಗ ಜನರು ಹೀಗೆನ್ನುತ್ತಾರೆ : ಈ ಕಾರಣದಿಂದಲೇ ನ್ಯಾಯನಿರ್ಣಯವು ನಮ್ಮಿಂದ ದೂರವಾಗಿದೆ, ಸದ್ಧರ್ಮವು ನಮಗೆ ದೊರಕದೆ ಇದೆ. ಬೆಳಕಿಗಾಗಿ ಕಾದಿರುವ ನಮ್ಮನ್ನು ಕತ್ತಲು ಆವರಿಸಿದೆ. ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಮ್ಮನ್ನು ಅಂಧಕಾರವೇ ಬೆನ್ನಟ್ಟುತ್ತಿದೆ.