ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?