ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.