ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ಈ ಜನರಿಗೆ, ‘ಖಡ್ಗ ನಿಮ್ಮ ಕಣ್ಣಿಗೂ ಕಾಣಿಸದು, ಕ್ಷಾಮ ನಿಮಗೆಂದಿಗೂ ಬಂದೊದಗದು. ಸರ್ವೇಶ್ವರ ಈ ನಾಡಿನಲ್ಲೆ ನಿಮಗೆ ಚಿರಶಾಂತಿ ಸಮಾಧಾನವನ್ನು ಕೊಡುವರು’ ಎಂದು ಪ್ರವಾದಿಗಳೇ ನುಡಿಯುತ್ತಿದ್ದಾರೆ,” ಎಂದು ಹೇಳಿದೆನು.