ಸರ್ವೇಶ್ವರ ಹೀಗೆನ್ನುತ್ತಾರೆ: “ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರಮಾಡಿರಿ. ‘ಸರ್ವೇಶ್ವರ ಆಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು’ ಎಂದು ಘೋಷಿಸುತ್ತಾ ಸ್ತುತಿಸಿರಿ.