ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.