ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ ಪಟ್ಟಣಕ್ಕೆ ಮರಳಿದವರು ನೂರೇ ಮಂದಿ: ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ ಇಸ್ರಯೇಲಿಗೆ ಮರಳಿದವರು ಹತ್ತೇ ಮಂದಿ.”