ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬೀದಿ ಚೌಕಗಳಲ್ಲೆಲ್ಲ ಗೋಳಾಟ ಇರುವುದು. ಹಾದಿಬೀದಿಗಳಲ್ಲೆಲ್ಲ ‘ಅಯ್ಯಯ್ಯೋ’ ಎಂದು ಜನರು ಪ್ರಲಾಪಿಸುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು ಗೋಳಾಡುವುದಕ್ಕೂ ಕರೆಯಲಾಗುವುದು.