ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.”