ಆ ದಿನದಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ. ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋದಿಸುವರು.