ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.