ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”
Go to Home Page