ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ.