ಜೆರುಬ್ಬಾಬೆಲನೇ, ಈಗ ಧೈರ್ಯದಿಂದಿರು. ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನೇ, ಎದೆಗುಂದಬೇಡ. ನಾಡಿನ ಜನರೇ, ನೀವೆಲ್ಲರು ಧೈರ್ಯದಿಂದ ಕೆಲಸಮಾಡಿ. ಇದು ಸೇನಾಧೀಶ್ವರ ಸರ್ವೇಶ್ವರ ಆದ ನನ್ನ ನುಡಿ. ನಾನು ನಿಮ್ಮೊಡನೆ ಇದ್ದೇನೆ.