“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.