ಆ ಐವತ್ತನೆಯ ವರ್ಷದಲ್ಲಿ, ಅಂದರೆ ‘ಜೂಬಿಲಿ’ ಸಂವತ್ಸರದಲ್ಲಿ ನೀವು ಬಿತ್ತನೆ ಮಾಡಬಾರದು; ತಾನಾಗಿ ಬೆಳೆದ ಫಸಲನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ಕೃಷಿಮಾಡದೆ ಬಿಟ್ಟ ದ್ರಾಕ್ಷೀತೋಟದ ಹಣ್ಣನ್ನು ಸಂಗ್ರಹಿಸಬಾರದು.