ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.