ಅದಕ್ಕೆ ಇಸ್ರಯೇಲರು, “ನಾವು ರಾಜಮಾರ್ಗದಲ್ಲೇ ಹೋಗುತ್ತೇವೆ. ನಾವಾಗಲಿ, ನಮ್ಮ ಜಾನುವಾರುಗಳಾಗಲಿ ನಿಮ್ಮ ನೀರನ್ನು ಕುಡಿದರೆ ಅದಕ್ಕೆ ಬೆಲೆ ಕೊಡುತ್ತೇವೆ. ಬೇರೆ ಏನೂ ನಮಗೆ ಬೇಡ; ಕಾಲ್ನಡೆಯಾಗಿ ದಾಟಿಹೋಗುವುದಕ್ಕೆ ಮಾತ್ರ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.