“ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬಾಳಿ ಅಭಿವೃದ್ಧಿಯಾಗುವಿರಿ. ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.