“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.