ನೀವು ಈಜಿಪ್ಟಿನಿಂದ ಹೊರಟುಬಂದ ಮೇಲೆ ಸರ್ವೇಶ್ವರ ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟರೆಂದು ಕೇಳಿದ್ದೇವೆ. ಅಲ್ಲದೆ ಜೋರ್ಡನ್ನಿನ ಆಚೆ ಇರುವ ಅಮೋರಿಯರ ಅರಸರಿಬ್ಬರನ್ನು ಅಂದರೆ, ಸೀಹೋನ್ ಮತ್ತು ಓಗ್ ಎಂಬವರನ್ನು ನೀವು ನಾಶಮಾಡಿದಿರೆಂದು ಕೇಳಿದ್ದೇವೆ.