ಯಾಜಕ ಎಲ್ಲಾಜಾರನ ಮಗ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ, “ಸರ್ವೇಶ್ವರ ನಿಮ್ಮ ಮಧ್ಯೆ ಇರುತ್ತಾರೆಂದು ಈಗ ಅರಿವಾಯಿತು. ನೀವು ಸರ್ವೇಶ್ವರಸ್ವಾಮಿಗೆ ವಿರುದ್ಧ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಇಸ್ರಯೇಲರನ್ನು ಆತನ ಶಿಕ್ಷಾಹಸ್ತದಿಂದ ತಪ್ಪಿಸಿದಿರಿ,” ಎಂದನು.